ಬೆಂಗಳೂರು: ವಿಶ್ವ ಸಂವಾದ ಕೇಂದ್ರ, ಕರ್ನಾಟಕ ಇದರ 25ನೇ ವರ್ಷದ ನಿಮಿತ್ತ “ಸ್ನೇಹಮಿಲನ ಕಾರ್ಯಕ್ರಮ” ಬೆಂಗಳೂರಿನ ಸೃಪತುಂಗ ರಸ್ತೆಯ ದಿ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಬೌದ್ಧಿಕ್ ಪ್ರಮುಖ್ ಶ್ರೀ ಸುಧೀರ್, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷ ಶ್ರೀ ವಿ. ನಾಗರಾಜ್, ವಿಶ್ವ ಸಂವಾದ ಕೇಂದ್ರ ಕರ್ನಾಟಕ ಇದರ ಟ್ರಸ್ಟಿ ಶ್ರೀ ಸತ್ಯನಾರಾಯಣ ಶಾನಭಾಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ಶ್ರೀ ನಾರಾಯಣ ಶೇವಿರೆಯವರು ಬರೆದ ‘ಹಿಂದುತ್ವ’, ‘ಭಾರತ’, ‘ಸ್ವತ್ವ’ ಕುರಿತ 3 ಕಿರುಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಉತ್ತರ ಮತ್ತು ದಕ್ಷಿಣ ಪ್ರಾಂತಗಳ ಪ್ರಚಾರ ಪ್ರಮುಖ್ ಅರುಣ್ ಕುಮಾರ್, ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಸೇರಿದಂತೆ ವಿಶ್ವ ಸಂವಾದ ಕೇಂದ್ರ ಕರ್ನಾಟಕದ ಟ್ರಸ್ಟಿಗಳು, ಚಿಂತಕರು ಪತ್ರಕರ್ತರು, ಅಂಕಣಕಾರರು, ಯುವ ಬರಹಗಾರರು, ಕಾರ್ಯಕರ್ತರು ಭಾಗವಹಿಸಿದ್ದರು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
